to
Posted on 27/11/2023

ಕುಂಸಿ ಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿನಂದನೆ ಸ್ವೀಕರಿಸಿದ ಕ್ಷಣ, ಹಾಗು ಕನ್ನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆದ ಕ್ರೀಡಾ ಸಮಾರಂಭದಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಸನ್ಮಾನಿಸಲಾಯಿತು.

Posted on 27/11/2023

ಶಿವಮೊಗ್ಗದ ಜೆಡಿಎಸ್ ಕಛೇರಿಯಲ್ಲಿ ನನ್ನ ಜನ್ಮ ದಿನ ಆಚರಿಸಿದ ಪಕ್ಷದ ವರಿಷ್ಠರು,ಕಾರ್ಯಕರ್ತರಿಗೆ ಹೃದಯ ಪೂರ್ವಕ ಧನ್ಯವಾದಗಳು

Posted on 08/11/2023

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆ.ಡಿ.ಪಿ) ಪ್ರಗತಿ ಪರಿಶೀಲನ ಸಭೆ ನಡೆಸಲಾಯಿತು. ಮತ್ತು ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

Posted on 07/11/2023

ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಿ, ರೈತರ ಆರ್ಥಿಕ ಶಕ್ತಿ ಹೆಚ್ಚುವ ಕೆಲಸಕ್ಕೆ ಚಾಲನೆ.

Posted on 28/10/2023

ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸಭೆಯನ್ನು ಕರೆದು ಗ್ರಾಮಠಾಣ ಮತ್ತು ನೀರಿನ ಸಮಸ್ಯೆಗಳ ಕುರಿತು ಸಭೆಯನ್ನು ನಡೆಸಲಾಯಿತು.

Posted on 28/10/2023

ಶಿವಮೊಗ್ಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಾಯಿತು.

Posted on 26/09/2023

ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆಯಿಂದ ಗೆಜ್ಜೇನಹಳ್ಳಿಯಲ್ಲಿ, ಕಾಲುಬಾಯಿ ರೋಗ ಲಸಿಕಾ ಅಭಿಯಾನ‌ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾಲುಬಾಯಿ ರೋಗದ ಕುರಿತು ಅನ್ನದಾತರಿಗೆ ಅರಿವು ಮೂಡಿಸಿದ ಸಂದರ್ಭ.

Posted on 14/09/2023

ಶಿವಮೊಗ್ಗದ ವಿನೋಬನಗರದ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಜೊತೆ ಶಾಲೆಯ ಕುಂದುಕೊರತೆಗಳ ಸಭೆ ನಡೆಸಲಾಯಿತು. ಈ ವೇಳೆ ಎಂಎಲ್‌ಸಿ ಭೋಜೇಗೌಡ ಅವರು ಇದ್ದರು. ಸಭೆಯಲ್ಲಿ ಪಾಲ್ಗೊಂಡು, ಶಾಲೆಯ ಕುಂದುಕೊರತೆಗಳನ್ನು ಆಲಿಸಲಾಯಿತು.

-->