ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ಪ್ರಗತಿ ಪರಿಶೀಲನ ಸಭೆಯಲ್ಲಿ ಶಿವಮೊಗ್ಗ ತಾಲೂಕಿನ ರೈತರ ಬಗರ್ ಹುಕುಂ ಭೂಮಿಯಲ್ಲಿ ಮಂಜೂರಾಗಿ ಖಾತೆ ಆಗಿ ಸಾಗುವಳಿ ಚೀಟಿಯಲ್ಲಿ ಕಂದಾಯ ಭೂಮಿ ಎಂದು ಕೊಟ್ಟ ನಂತರ , ಯಾವುದೇ ಕಾರಣವನ್ನು ಹೇಳದೆ ತಕ್ಷಣ ರದ್ದು ಮಾಡಿರುವ ಕ್ರಮ ಸರಿಯಾಗಿಲ್ಲ ಎಂದು ಸಭೆಯಲ್ಲಿ ರೈತರ ಪರ ಪ್ರಶ್ನೆ ಮಾಡಿದ್ದು, ರೈತರಿಗೆ ಬೆಳೆ ಪರಿಹಾರದ ಬಗ್ಗೆಯೂ ಸಭೆಯಲ್ಲಿ ಪ್ರಶ್ನೆ ಮಾಡಲಾಯಿತು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹಾಗೂ ನೌಕರರ ಎಲ್ಲಾ ವೃಂದದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ, ಜಿಲ್ಲಾ ಸಮಿತಿ ಇವರ ನೇತೃತ್ವದಲ್ಲಿ ಆರ್.ಡಿ.ಪಿ.ಆರ್ ಕುಟುಂಬದ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆ ಕುರಿತು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಹಲವಾರು ಬೇಡಿಕೆಗಳ ಮನವಿ ಪತ್ರ ಸ್ವೀಕರಿಸಲಾಯಿತು.
ಶಿವಮೊಗ್ಗದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಿಸಿ ಕಾರ್ಯಕರ್ತರ ಕೆಲಸವನ್ನು ಪ್ರಶಂಸೆ ಮಾಡಲಾಯಿತು.
ಸಾಗರದ ಎಸಿ ಕಚೇರಿಯ ಮುಂದೆ ಶಿವಮೊಗ್ಗ ಜಿಲ್ಲಾ ರೈತ ಸಂಘ, ಮಲೆನಾಡು ರೈತರ ಹೋರಾಟ ಸಮಿತಿ, ಮುಳುಗಡೆ ಸಂತ್ರಸ್ತರ ಹಾಗೂ ಭೂ ಹಕ್ಕು ವಂಚಿತರ ಸಂಯುಕ್ತ ವೇದಿಕೆಗಳ ವತಿಯಿಂದ ಶರಾವತಿ ಮುಳುಗಡೆ ಸಂತ್ರಸ್ತರಿಗೆ, ಅರಣ್ಯ ಭೂಮಿ ಸಾಗುವಳಿದಾರರಿಗೆ ಭೂಮಿಯ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿಯ ಅಹೋರಾತ್ರಿ ಸತ್ಯಾಗ್ರಹ ನಡೆಸಿದಾಗ , ಸ್ಥಳಕ್ಕೆ ಭೇಟಿ ನೀಡಿ ರೈತ ಮುಖಂಡರ ಜತೆ ಮಾತನಾಡಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರೈತರ ಪರವಾಗಿ ಧ್ವನಿಯಾಗುವುದಾಗಿ ಭರವಸೆ ನೀಡಿ ಮಾತನಾಡಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ ಸಂಘ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಕುವೆಂಪು ರಂಗಮAದಿರದಲ್ಲಿ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿ ಭಗವದ್ಗೀತೆ ಹಾಗೂ ಕೃಷ್ಣನ ಮಹತ್ವದ ಬಗ್ಗೆ ಹೇಳಲಾಯಿತು.
ಶಿವಮೊಗ್ಗ ಗ್ರಾಮಾಂತರದ ಜನ ಯಾವತ್ತೂ ನನ್ನ ಕೈ ಬಿಟ್ಟಿಲ್ಲ, ೨೦೧೩ ರ ಫಲಿತಾಂಶ ಮರುಕಳಿಸುತ್ತದೆ.
Watch Videoಶಿವಮೊಗ್ಗದಲ್ಲಿ ಪಂಚರತ್ನ ರಥ ಯಾತ್ರೆಯ ವಿಶೇಷತೆ ಬಗ್ಗೆ ಚರ್ಚೆ
Watch Video೨೦೨೩ ಚುನಾವಣೆ ಸಿದ್ಧತೆ, ಪ್ರಚಾರ ಕಾರ್ಯಗಳು, ಜನರ ಬೆಂಬಲದ ಬಗ್ಗೆ ಮಾತನಾಡಲಾಯಿತು
Watch Videoನನ್ನ ರಾಜಕೀಯ ಜೀವನದ ಆದಿ, ಆಗು ಹೋಗುಗಳು ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಲಾಯಿತು
Watch Video